Breaking News

ಲೋಹದ ತಡೆಗೋಡೆಗೆ ಬೈಕ್ ಡಿಕ್ಕಿ : ತಂದೆ, ಮಗಳು ಸಾವು


ಕುಷ್ಟಗಿ: ಕುಷ್ಟಗಿ-ಹೊಸಪೇಟೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ವಣಗೇರಾ ಮೇಲ್ಸೇತುವೆ ಬಳಿ ಲೋಹದ ತಡೆಗೋಡೆಗೆ ಬೈಕ್ ಡಿಕ್ಕಿಯಾದ ಪರಿಣಾಮ ತಂದೆ, ಮಗಳು ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತೊಂಡಿಹಾಳ ಗ್ರಾಮದ ಬಸಯ್ಯ ಕಳಕಯ್ಯ ಹಿರೇಮಠ (29) ಹಾಗೂ 5 ವರ್ಷದ ಮಗಳು ಅಕ್ಷರಾ ಮೃತಪಟ್ಟವರು.

ಕುಷ್ಟಗಿಯ ಶರಣಯ್ಯ ಹಿರೇಮನ್ನಾಪೂರ ಅವರ ಮನೆಗೆ ಬಂದಿದ್ದ ಇವರು ಬೈಕಿನಲ್ಲಿ ಪತ್ನಿ ಶಾಂತಮ್ಮ ಹಾಗೂ ಇಬ್ಬರ ಮಕ್ಕಳ ಜೊತೆ ಬಸಯ್ಯ ತಮ್ಮ ಸ್ವಗ್ರಾಮ ತೊಂಡಿಹಾಳಕ್ಕೆ ವಾಪಸ್​ ಆಗುತ್ತಿದ್ದರು. ವಣಗೇರಾ ಮೇಲ್ಸೇತುವೆ ದಾಟಿ ಹೊರಟಿದ್ದ ವೇಳೆ ಬೈಕ್​​ನ ಹ್ಯಾಂಡಲ್ ಹೊರಳಿಸಲು ಸಾಧ್ಯವಾಗದೇ ಲೋಹದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಸಯ್ಯ ಹಿರೇಮಠ ಹಾಗೂ ಮಗಳು ಸ್ಥಳದಲ್ಲಿ ಮೃತರಾಗಿದ್ದಾರೆ.

ಮೃತನ ಪತ್ನಿ ಶಾಂತಮ್ಮ, ಮಗ ಶ್ರೀಶೈಲ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸಿಪಿಐ ನಿಂಗಪ್ಪ ರುದ್ರಪ್ಪಗೋಳ, ಪಿಎಸ್​​ಐ ತಿಮ್ಮಣ್ಣ ನಾಯಕ ಭೇಟಿ ನೀಡಿ ಪರಿಶೀಲಿಸಿದರು. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *