ನವದೆಹಲಿ: “ಕರ್ನಾಟಕದ ಪಿಎಸ್ಐ ನೇಮಕಾತಿಯಲ್ಲಿ ಭಾರೀ ಹಗರಣ ನಡೆದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ್ಯಾಯಯುತ ತನಿಖೆಗೆ ಆದೇಶಿಸಿ ತಾವು ರಾಜೀನಾಮೆ ನೀಡಬೇಕು” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭ್ರಷ್ಟಾಚಾರಕ್ಕೆ ಸ್ಥಾನವಿಲ್ಲ ಎಂಬ ಅವರ ಪುನರಾವರ್ತಿತ ಹೇಳಿಕೆಗಳ ಬಗ್ಗೆ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ “ನಾ ಖಾವೂಂಗಾ, ನಾ ಖಾನೆ ದುಂಗಾ ಎನ್ನುವವರು ಬಸವರಾಜ ಬೊಮ್ಮಾಯಿ ವಿರುದ್ಧ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ?” ಎಂದು ಕೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





