Breaking News

ಗುರೂಜಿ ಹತ್ಯೆ ಮಾಡಿದ ಆರೋಪಿಗಳು ಬಾಯ್ಬಿಟ್ಟ ಸತ್ಯ ಏನು?ಎಫ್ ಐ ಅರ್ ನಲ್ಲಿ ಏನಿದೆ…

ಹುಬ್ಬಳ್ಳಿ: ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ (57) ಅವರನ್ನು ಶ್ರೀನಗರ ಕ್ರಾಸ್‌ನಲ್ಲಿರುವ ದಿ ಪ್ರೆಸಿಡೆಂಟ್‌ ಹೋಟೆಲ್‌ನ ರಿಸೆಪ್ಶನ್‌ ಲಾಬಿಯಲ್ಲಿ ಅವರ ಇಬ್ಬರು ಆಪ್ತರು ಮಂಗಳವಾರ ಮಧ್ಯಾಹ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದು ತಡರಾತ್ರಿ ಪ್ರಥಮ ಮಾಹಿತಿ ವರದಿ( ಎಫ್ ಐ ಆರ್) ದಾಖಲಾಗಿದ್ದು ಇದರಲ್ಲಿ ಮಹತ್ವದ ಅಂಶಗಳನ್ನು ಆರೋಪಿಗಳು ಬಿಚ್ಚಿಟ್ಟುದ್ದಾರೆ.

ಘಟನೆಗೆ ಸಂಬಂಧಿಸಿ ಗುರೂಜಿ ಅವರ ಸಹೋದರನ ಮಗ ಸಂಜಯ್‌ ಅಂಗಡಿ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು ‘ಸರಳ ವಾಸ್ತು ಸಂಸ್ಥೆಯಲ್ಲಿ ಅವ್ಯವಹಾರ ನಡೆಸಿದ್ದ ಕಾರಣಕ್ಕೆ ಮಹಾಂತೇಶ ಅವರನ್ನು ಚಂದ್ರಶೇಖರ ಗುರೂಜಿ ಕೆಲಸದಿಂದ ತೆಗೆದಿದ್ದರು. ಆ ಸಿಟ್ಟಿನಿಂದ ಹುಬ್ಬಳ್ಳಿ ಗೋಕುಲ ರಸ್ತೆ, ಜೆಸಿ ನಗರದಲ್ಲಿ ಗುರೂಜಿ ನಿರ್ಮಿಸಿರುವ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಕಿಂಗ್‌ಗೆ ಜಾಗ ಕೊಟ್ಟಿರಲಿಲ್ಲ ಹಾಗೂ ಸೋಲಾರ್ ವ್ಯವಸ್ಥೆ ಅಳವಡಿಕೆ ಮಾಡಿಲ್ಲ ಎಂದು ಮಹಾಂತೇಶ ಧಾರವಾಡ ಗ್ರಾಹಕರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.

ಪ್ರಕರಣ ಹಿಂಪಡೆಯಲು ಗುರೂಜಿ ಅವರಲ್ಲಿ ಹಣ ಕೇಳುತ್ತಿದ್ದರು. ಆಗಾಗ ಜೀವ ಬೆದರಿಕೆ ಹಾಕಿ ಮಾನಸಿಕ ಹಿಂಸೆ ನೀಡುತ್ತಿದ್ದರು. ಹಣ ನೀಡದ ಹಿನ್ನೆಲೆಯಲ್ಲಿ ಹಾಗೂ ಕೆಲಸದಿಂದ ತೆಗೆದು ಹಾಕಿದ್ದರಿಂದ ಹತ್ಯೆ ಮಾಡಿದ್ದಾರೆ’ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ವನಜಾಕ್ಷಿ ಬಳಿ ತಮ್ಮ ಆಸ್ತಿ ಕೇಳಿದ್ದಕ್ಕೆ ಚಂದ್ರಶೇಖರ್ ಗುರೂಜಿ ಹತ್ಯೆಯಾಯಿತೇ? ಎಂಬ ಮಾಹಿತಿ ಸಹ ಇದೆ.

Share News

About admin

Check Also

ಕೌಟುಂಬಿಕ ಕಲಹ: ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ವೈದ್ಯ ಡಾ.ಮಹೇಂದ್ರ ರೆಡ್ಡಿ ವೈದ್ಯೆಯಾಗಿದ್ದ ಪತ್ನಿ ಡಾ.ಕೃತ್ತಿಕಾ ರೆಡ್ಡಿಯನ್ನು ಕೊಲೆಗೈದುರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ …

Leave a Reply

Your email address will not be published. Required fields are marked *