ಹುಬ್ಬಳ್ಳಿ : ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆಯನ್ನು ಮಾಡಲಾಗುತ್ತಿದೆಸುಳ್ಳ ರಸ್ತೆಯ ಜಮೀನಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದ್ದು , ಜೆಸಿಬಿ ಸ್ವಚ್ಛತಾ ಕಾರ್ಯ ಆರಂಭಿಸಿದೆ.

ಅಂತ್ಯಕ್ರಿಯೆಯ ಸ್ಥಳದಲ್ಲಿ ಸರಳ ಜೀವನ ಸಿಬ್ಬಂದಿ ಮಾತ್ರ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಇನ್ನೂ ಇಂದು ಮಧ್ಯಾಹ್ನ 1 30 ಕ್ಕೆ ನಡೆಯಲಿರುವ ಅಂತ್ಯಕ್ರಿಯೆಗೆ ಸುಳ್ಳ ರಸ್ತೆಯ ಗುರೂಜಿಯವರ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿದ್ದು , ಅಂತ್ಯಕ್ರಿಯೆ ಸ್ಥಳದಲ್ಲಿಯೆ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





