ಧಾರವಾಡ : ಡಾ.ಚಂದ್ರಶೇಖರ ಗುರೂಜಿ ಅವರ ಅಂತ್ಯಸಂಸ್ಕಾರ ಮುಗಿಸಿ ವಾಪಸ್ ಹೋಗುತ್ತಿದ್ದ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮೀಜಿ ಅವರ ಕಾರು ಅಪಘಾತವಾಗಿದ್ದು , ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ .

ನಿನ್ನೆ ಕೊಲೆಗೀಡಾದ ಡಾ.ಚಂದ್ರಶೇಖರ ಗುರೂಜಿ ಅವರ ಅಂತ್ಯ ಸಂಸ್ಕಾರಕ್ಕೆ ಶಿವಲಿಂಗೇಶ್ವರ ಸ್ವಾಮೀಜಿ ಬಂದಿದ್ದರು . ಅಂತ್ಯ ಸಂಸ್ಕಾರ ಮುಗಿಸಿ ವಾಪಸ್ ಹೋಗುತ್ತಿದ್ದ ಸಂದರ್ಭದಲ್ಲಿ ಧಾರವಾಡ ತಾಲೂಕಿನ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ .

ಸ್ವಾಮೀಜಿ ಸೇರಿದಂತೆ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಗಾಯಾಳುಗಳನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ . ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು .

bigtvnews | Hubli Dharwad News | Kannada News | Karnataka News Hubli News | News In Hubli | Local news





