ಹುಬ್ಬಳ್ಳಿ : ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ ನಡೆದಿದ್ದು, ಈಗಾಗಲೇ ಕೊಲೆಗಾರರನ್ನು ಪೊಲೀಸರು ಬಂಧಿಸಿದ್ದು, ಕೊಲೆ ಆರೋಪಿ ಮಹಾಂತೇಶ್ ಐದು ದಿನಗಳ ಹಿಂದೆ ಫೇಸ್ ಬುಕ್ ನಲ್ಲಿ ಗುರೂಜಿಯನ್ನು ಕೊಲ್ಲುವ ಸುಳಿವು ಕೊಟ್ಟಿದ್ದ ಎಂದು ತಿಳಿದುಬಂದಿದೆ.
ಐದು ದಿನಗಳ ಹಿಂದೆ ಆರೋಪಿ ಮಹಾಂತೇಶ್ ಫೇಸ್ಬುಕ್ ನಲ್ಲಿ ಭಗವದ್ಗೀತೆಯ ಶ್ಲೋಕದ ಪೋಸ್ಟ್ ಅನ್ನು ಶೇರ್ ಮಾಡಿದ್ದ ಆರೋಪಿ, ‘ಅಧರ್ಮ ತಾಂಡವಾಡುತ್ತಿರುವಾಗ ದುಷ್ಟರನ್ನು ನಾಶ ಮಾಡಲು ಮತ್ತು ಧರ್ಮವನ್ನು ಪುನಃ ಸ್ಥಾಪಿಸಲು ನೀನು ಬರುವುದಾಗಿ ವಚನ ನೀಡಿರುವೆ ಪ್ರಭು. ಇನ್ನು ವಿಳಂಬವೇಕೆ ಪ್ರಭುವೇ? ಆದಷ್ಟು ಬೇಗ ಅವತರಿಸು ಪ್ರಭು. ಸಂಭವಾಮಿ ಯುಗೇ ಯುಗೇ’ ಎಂದು ಬರೆದುಕೊಂಡಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





