ಹುಬ್ಬಳ್ಳಿ : ಕೌಟುಂಬಿಕ ಹಳೆಯ ದ್ವೇಷದ ಹಿನ್ನೆಲೆ ರಾಯನಾಳ ಗ್ರಾಪಂ ಸದಸ್ಯನನ್ನು ಕೊಲೆ ಮಾಡಿದ್ದ ಘಟನೆಗೆ ಸಂಬಂಧಿಸಿ ಹಳೇಹುಬ್ಬಳ್ಳಿ ಪೊಲೀಸರು ಬುಧವಾರ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ರಾಯನಾಳ ಗ್ರಾಪಂ ಸದಸ್ಯ ಗಂಗಿವಾಳ ಗ್ರಾಮದ ದೀಪಕ ಶಿವಾಜಿ ಪಟದಾರಿ ( 30 ) ಅವರನ್ನು ಸೋಮವಾರ ರಾತ್ರಿ ರಾಯನಾಳದಲ್ಲಿ 6 ರಿಂದ 8 ಜನರ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.ಈ ಕುರಿತು ಹತ್ಯೆಯಾದ ದೀಪಕನ ಸಹೋದರ ಹಳೇಹುಬ್ಬಳ್ಳಿ ಠಾಣೆಯಲ್ಲಿ ಮೇಟಿ ಕುಟುಂಬದ ಸದಸ್ಯರು ಸೇರಿದಂತೆ ಕೆಲವರ ಮೇಲೆ ದೂರು ದಾಖಲಿಸಿದ್ದರು.ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ವಶಕ್ಕೆ ಪಡೆದಿದ್ದು , ಇನ್ನು ಕೆಲವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





