ಹುಬ್ಬಳ್ಳಿ : ಉಣಕಲ್ ಕೆರೆ ಬಳಿಯ ದಿ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಚಂದ್ರಶೇಖರ ಗುರೂಜಿ ಅವರ ಬರ್ಬರ ಕೊಲೆ ಹಿನ್ನಲೆ ಹೋಟೆಲ್ ಆಡಳಿತ ಮಂಡಳಿ & ಸಿಬ್ಬಂದಿ ವರ್ಗ ದೈವದ ಮೊರೆ ಹೋಗಿದ್ದಾರೆ.

ಗುರೂಜಿ ಹತ್ಯೆ ನಡೆದ ಸ್ಥಳದಲ್ಲೇ ಹೋಟೆಲ್ ಆಡಳಿತ ಮಂಡಳಿ ಹೋಮ ಹಾಕಿಸಿದ್ದಾರೆ. ಗುರೂಜಿ ಕೊನೆಯುಸಿರೆಳೆದ ಸ್ಥಳದಲ್ಲೇ ಹೋಮ, ಹವನ ಮಾಡಿಸಲಾಗುತ್ತಿದೆ. ಗುರೂಜಿ ಹತ್ಯೆಯಿಂದ ತೀವ್ರ ಆತಂಕಗೊಂಡ ಸಿಬ್ಬಂದಿ. ಹೋಟೆಲ್ ನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಭಯ ದೂರಮಾಡಲು ಮತ್ತು ಹೋಟೆಲ್ ಶುದ್ಧಗೊಳಿಸಲು ಹೋಮ ಮಾಡಲಾಗುತ್ತಿದೆ. ಹುಬ್ಬಳ್ಳಿ ಖ್ಯಾತ ಪುರೋಹಿತರಿಂದ ಪೂಜೆ ಮಾಡಿಸಲಾಗುತ್ತಿದೆ. ಸುದರ್ಶನ ಹೋಮ ಮಾಡಿಸಿ ಹೋಟೆಲ್ ಗೆ ಅಂಟಿದ ಕಳಂಕ ದೂರಮಾಡುವ ಪ್ರಯತ್ನ ಮಾಡಲಾಗುತ್ತಿದೆ.ಇಬ್ಬರು ಪುರೋಹಿತರಿಂದ ಮಂತ್ರಘೋಷವಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





