ಚಾಮರಾಜಪೇಟೆ : ನಗರದ ರ್ಈದ್ಗಾ ಮೈದಾನ ಭೂವಿವಾದ ಕುರಿತು ಇಂದು ಸಭೆ ನಡೆಸಲಾಗಿದ್ದು, ವೆಂಕಟರಾಮ್ ಕಲಾಭವನದಲ್ಲಿ ಸೌಹಾರ್ದ ಸಭೆ ನಡೆದಿದ್ದು, ಸಭೆಯಲ್ಲಿ ಮಾಜಿ ಕಾರ್ಪೋರೇಟರ್ ಗಳು, ಶಾಸಕ ಜಮೀರ್ ಅಹ್ಮದ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಆದರೆ ಸಭೆಯಲ್ಲಿ ಸಂಸದ ಪಿ ಸಿ ಮೋಹನ್, ಮಾಜಿ ಶಾಸಕರಾದ ಪ್ರಮೀಳಾ ನೇಸರ್ಗಿ ಸಭೆಗೆ ಗೈರಾಗಿದ್ದರು. ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ್ದ ಮಾಜಿ ಕಾರ್ಪೊರೇಟರ್ ಚಂದ್ರಶೇಖರ್ ಸ್ಥಳೀಯ ಶಾಸಕರು ಆಟದ ಮೈದಾನವನ್ನು ಉಳಿಸಿಕೊಂಡು ಹೋಗ್ಬೇಕು ಅನ್ನೋದು ನಮ್ಮ ಆಸೆ. ನಾವು ಇರುವವರೆಗೂ ಆಟದ ಮೈದಾನ ಉಳಿಸಿಕೊಂಡು ಹೋಗ್ತೀವಿ ಅಂತ ತಿಳಿಸಲಿ. ಹಾಗೆ ತಿಳಿಸಿದ್ರೆ, ನಾಗರೀಕ ವೇದಿಕೆಗೆ ಬಂದ್ ಕೈ ಬಿಡುವಂತೆ ಮನವಿ ಮಾಡುತ್ತೇವೆ ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





