Breaking News

ಪರಿಹಾರಕ್ಕಾಗಿ ನಾಳೆ ಎನ್ನುವ ಪ್ರಶ್ನೆಯೇ ಇಲ್ಲ: ಹಾಲಪ್ಪ ಆಚಾರ

ಹುಬ್ಬಳ್ಳಿ: ಜಿಲ್ಲಾ ಖಜಾನೆಯಲ್ಲಿ ಹಾಗೂ ರಾಜ್ಯ ಸರ್ಕಾರದಲ್ಲಿ ಯಾವುದೇ ರೀತಿ ಹಣದ ತೊಂದರೆ ಇಲ್ಲ. ಪರಿಹಾರಕ್ಕಾಗಿ ನಾಳೆ ಎನ್ನುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಹೇಳಿದರು.

ಜಿಲ್ಲೆಯ ಪ್ರವಾಸ ಕೈಗೊಂಡಿರುವ ವೇಳೆಯಲ್ಲಿ ಯಲಿವಾಳ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರ್ಕಾರ ನಿರ್ದೇಶನ ನೀಡದಂತೆ ಭಾಗಶಃ ಮನೆ ಕಳೆದುಕೊಂಡವರಿಗೆ ಐದು ಲಕ್ಷ ಪರಿಹಾರ, 50% ನಿಂದ 75% ಹಾನಿಯಾಗಿದ್ದವರಿಗೆ 3 ಲಕ್ಷ ಹಾಗೂ ಮನೆಯಲ್ಲಿ ದವಸ ಧಾನ್ಯಗಳು ಹಾನಿಯಾಗಿರುವರಿಗೆ ಹತ್ತು ಸಾವಿರ ಹೀಗೆ ಎನ್.ಡಿ.ಆರ್.ಎಫ್ ಡೈರೆಕ್ಷನ್ ಮೂಲಕ ನೀಡಲಾಗುತ್ತದೆ. ಜಿಲ್ಲಾ ಖಜಾನೆಯಲ್ಲಿ ಹಾಗೂ ರಾಜ್ಯ ಸರ್ಕಾರದಲ್ಲಿ ಯಾವುದೇ ರೀತಿಯಲ್ಲಿ ಹಣದ ತೊಂದರೆ ಇಲ್ಲ ಕೂಡಲೇ ಪರಿಹಾರ ನೀಡಲಾಗುತ್ತದೆ ಎಂದರು.

ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಿರುವ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಬೊಮ್ಮಾಯಿಯವರ ನೇತೃತ್ವದಲ್ಲಿ ಯಾವುದೇ ತಾರತಮ್ಯ ಆಗಿಲ್ಲ, ಆಗುವುದಿಲ್ಲ. ಇಲ್ಲ ಎನ್.ಡಿ.ಆರ್.ಎಫ್ ನಿರ್ದೇಶನದಂತೆ ಅರ್ಹ ಫಲಾನುಭವಿಗಳಿಗೆ ಸೂಕ್ತವಾದ ಪರಿಹಾರ ನೀಡುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಜೂನ್ ನಿಂದ ಅಗಸ್ಟ ತಿಂಗಳವರೆಗೆ ಮಳೆಯಿಂದ ಹಾನಿಯಾಗಿರುವ ಹಾಗೂ ಈ ಹಿಂದೆ ತಾಂತ್ರಿಕ ತೊಂದರೆಯಿಂದ ಪರಿಹಾರ ಸಿಗದೇ ಇರುವವರಿಗೆ ಕೂಡಲೇ ಪರಿಹಾರ ಕಲ್ಪಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡಲಿದೆ ಎಂದು ಅವರು ಭರವಸೆ ನೀಡಿದರು.

Share News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *