ಉಡುಪಿ : ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ನೆರೆ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಆಗಿರುವ ತಾತ್ಕಾಲಿಕ ಪರಿಹಾರವಾಗಿ ತಕ್ಷಣ 500 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಉಡುಪಿಯಲ್ಲಿ ಕರಾವಳಿ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮಳೆಹಾನಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಈ ತಿಂಗಳಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಮಳೆಯಾಗಿದೆ. ಪರಿಣಾಮ ಸಾಕಷ್ಟು ಮೂಲ ಸೌಕರ್ಯಗಳಿಗೆ ಹಾನಿಯಾಗಿದ್ದು, ಇದನ್ನು ಸರಿಪಡಿಸಲು 500 ಕೋಟಿ ರೂ. ಬಳಸಲಾಗುತ್ತದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





