Breaking News

ಅಮಾನತು ಹಿನ್ನಲೆ: ಪಿಎಸ್​​ಐ ನದಿಗೆ ಹಾರಿ ಆತ್ಮಹತ್ಯೆ


ವಿಜಯಪುರ: ಯುವಕನೊಬ್ಬನ ಮೇಲೆ ಕಳ್ಳತನ ಆರೋಪ ಹೊರಿಸಿ, ಆತನನ್ನು ಠಾಣೆಗೆ ಕರೆಯಿಸಿ ವಿಚಾರಣೆ ಮಾಡುವ ನೆಪದಲ್ಲಿ ಥಳಿಸಿ ಆತ್ಮಹತ್ಯೆಗೆ ಕಾರಣರಾದ ಆರೋಪದ ಮೇಲೆ ಪಿಎಸ್​​ಐವೊಬ್ಬರನ್ನು ಅಮಾನತು ಮಾಡಲಾಗಿದೆ. ಇಲ್ಲಿನ ಎಪಿಎಂಸಿ ಠಾಣೆ ಪಿಎಸ್​​ಐ ಸೋಮೇಶ ಗೆಜ್ಜಿ ಅಮಾನತುಗೊಂಡ ಅಧಿಕಾರಿಯಾಗಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್​​ ಈ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳ ಹಿಂದೆ ಬಸವನಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ಸೋಮಶೇಖರ ನಾಗಮೋತಿ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ. ಇದಕ್ಕೂ ಮುನ್ನ ಯುವಕ ಸೋಮಶೇಖರ, ತಮ್ಮ ಸಹೋದರನ ಕಾರಿನಲ್ಲಿದ್ದ ಹಣ ಕದ್ದಿದ್ದಾನೆ ಎಂಬ ಆರೋಪದ ಮೇಲೆ ಪಿಎಸ್​​ಐ ಸೋಮೇಶ ದೂರು ದಾಖಲಿಸಿಕೊಂಡು ಠಾಣೆಗೆ ಕರೆಯಿಸಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಅಲ್ಲದೆ, ಘಟನೆಯಿಂದ ಮನನೊಂದ ಸೋಮಶೇಖರ ವಿಡಿಯೋ ಸಂದೇಶ ಹಾಗೂ ಡೆತ್​​ನೋಟ್ ಬರೆದಿಟ್ಟು ಕೊಲ್ಹಾರದ ಬಳಿ ಕೃಷ್ಣ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಪಿಎಸ್​ಐ ಸೋಮೇಶ ಗೆಜ್ಜಿ ಮೇಲೆ ಗಂಭೀರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಿ, ತನಿಖೆ ಮುಂದುವರೆಸಲಾಗಿದೆ ಎಂದು ಎಸ್​ಪಿ ಆನಂದಕುಮಾರ್ ತಿಳಿಸಿದ್ದಾರೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *