ಗದಗ: ‘ಕಾಂಗ್ರೆಸ್ ಪಕ್ಷಲ್ಲೇ ಒಳಜಗಳವಿದ್ದು, ನಾಯಕರು ಅಧಿಕಾರಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ. ಹಾಗಾಗಿ, ಸಿದ್ದರಾಮೋತ್ಸವ ಎಂಬುದು ಕಾಂಗ್ರೆಸ್ನವರು ಕಾಂಗ್ರೆಸ್ನವರಿಗಾಗಿಯೇ ಮಾಡಿಕೊಳ್ಳುತ್ತಿರುವ ಉತ್ಸವ ಅಷ್ಟೇ’ ಎಂದು ಸಚಿವ ಹಾಲಪ್ಪ ಆಚಾರ್ ಲೇವಡಿ ಮಾಡಿದರು.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಭಾರತೀಯ ಜನತಾ ಪಾರ್ಟಿ ಕಾಂಗ್ರೆಸ್ಗೆ ಭಯ ಬೀಳುವ ಪ್ರಶ್ನೆಯೇ ಇಲ್ಲ. ರಾಜಕೀಯವಾಗಿ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಸಂಪೂರ್ಣ ಕಳೆದುಕೊಂಡಿದೆ. ಅದನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಕೇರಳದಿಂದ ಆಂಧ್ರದವರೆಗೆ ಬೇಕಾದರೂ ಪಾದಯಾತ್ರೆ ಮಾಡುತ್ತಾರೆ’ ಎಂದು ಕಾಲೆಳೆದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





