ಚಿತ್ರದುರ್ಗ: ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಾಸಕರಾದ, ಗೂಳಿಹಟ್ಟಿ ಡಿ.ಶೇಖರ್ ಹಾಗೂ ಎಂ.ಚಂದ್ರಪ್ಪ ಅವರಿಗೆ ಬಂದಿರುವ ಬೆದರಿಕೆ ಕರೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಚಿತ್ರದುರ್ಗ ಎಸ್ ಪಿ ಕೆ.
ಪರಶುರಾಮ್ ಹೇಳಿದ್ದಾರೆ.

ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್ಪಿ) ಆಯಪ್ ಮೂಲಕ ಚಿತ್ರದುರ್ಗ ಪೊಲೀಸರಿಗೆ ಸಂದೇಶ ಬಂದಿದೆ. ಭೋವಿ ಸಮುದಾಯಕ್ಕೆ ಸೇರಿದ ಹಲವು ಮುಖಂಡರು ಹಾಗೂ ಅವರ ಕುಟುಂಬ ಅಪಾಯದಲ್ಲಿದೆ ಎಂದು ಸಂದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





