ಮಂಗಳೂರು: ಕನ್ನಡ ಚಿತ್ರರಂಗದ ಉದಯೋನ್ಮುಖ ನಾಯಕ ನಟ ಪೃಥ್ವಿ ಅಂಬರ್ ಅವರ ತಾಯಿ ಸುಜಾತಾ ವೀರಪ್ಪ ಅಂಬರ್ ನಿನ್ನೆ (ಜುಲೈ 15) ರಂದು ನಿಧನ ಹೊಂದಿದ್ದಾರೆ.
ಸುಜಾತಾ ಅವರು ಕೆಲ ಸಮಯದಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.ಅವರ ಅಂತ್ಯಕ್ರಿಯೆ ಇಂದು ಮಂಗಳೂರಿನಲ್ಲಿ ನಡೆಯಲಿದೆ.
ಸುಜಾತಾ ಅವರು, ಮಂಗಳೂರಿನ ಆರ್ಎಸ್ಎಸ್ ಪ್ರಮುಖ ವೀರಪ್ಪ ಅಂಬರ್ ಅವರ ಪತ್ನಿಯಾಗಿದ್ದರು. ಹಲವು ರೀತಿಯ ಸಮಾಜ ಸೇವೆಗಳಲ್ಲಿ, ಮಹಿಳಾಪರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಸುಜಾತಾ ಅಂಬರ್ ದುರ್ಗಾಪರಮೇಶ್ವರಿ ದೇವಾಲಯದ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





