ಕಲಘಟಗಿ : ಕಲಘಟಗಿ ತಾಲೂಕಿನ ನೀರಸಾಗರದ ಜಲಾಶಯದ ಬಳಿ ಸೆಲ್ಸಿ ತೆಗೆದುಕೊಳ್ಳಲು ಹೋಗಿ ಯುವಕ ನೀರುಪಾಲಾಗಿರುವ ಘಟನೆ ನಿನ್ನೆ ( ಭಾನುವಾರ ) ನಡೆದಿದೆ .
ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ ನಿವಾಸಿ ಕಿರಣ ರಜಪೂತ ( 22 ) ನೀರು ಪಾಲಾದ ಯುವಕ . ಇಂದು ಗೆಳೆಯರ ಜೊತೆಗೆ ಪ್ರವಾಸಕ್ಕೆಂದು ಹೋಗಿದ್ದಾಗ ಈ ವೇಳೆ ಸೆಲ್ಸಿಗಾಗಿ ಜಲಾಶಯದ ದಡದಲ್ಲಿ ನಿಂತಿದ್ದನು . ಏಕಾಏಕಿ ನೀರಿನ ರಭಸಕ್ಕೆ ಯುವಕ ಕೊಚ್ಚಿ ಹೋಗಿದ್ದಾನೆ .
ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ನೀರಿನಲ್ಲಿ ಕೊಚ್ಚಿ ಹೋದ ಕಿರಣ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ .
ಈ ದುರ್ಘಟನೆಯು ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news





