ರಾಜ್ಯದ ಬಹುತೇಕ ಭಾಗಗಳಲ್ಲಿ ಸೂರ್ಯನ ದರ್ಶನ ಆಗಲಿದೆ. ಕಳೆದ 15 ದಿನಗಳಿಂದ ಮೋಡ ಕವಿದ ವಾತಾವರಣದಿಂದ ಬೇಸತ್ತಿದ್ದ ಜನರು ಸೂರ್ಯನಿಗೆ ಮೈಯೊಡ್ಡುತ್ತಿದ್ದಾರೆ. ಮಲೆನಾಡಿನ ಕೆಲ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.
ರಾಜಧಾನಿ ಬೆಂಗಳೂರಿನ ಜನರಿಗೆ ಬಹಳ ದಿನಗಳ ನಂತರ ನೀಲಿ ಆಗಸ ಕಾಣುವ ಅವಕಾಶ ಸಿಗಲಿದೆ. ಸಂಜೆ ವೇಳೆಗೆ ಮಳೆಯ ಸಿಂಚನ ಉಂಟಾಗುವ ಸಾಧ್ಯತೆಗಳಿವೆ. ಇಂದು ಗರಿಷ್ಠ 28 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಬಳ್ಳಾರಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ಎರಡು ವಾರಗಳಿಂದ ನಿರಂತರವಾಗಿ ಮಳೆಯಾದ ಪರಿಣಾಮ ಕೊಂಚ ಚಳಿ ಸಹ ಹೆಚ್ಚಾಗಿದೆ. ಇತ್ತ ಮಳೆ ಬ್ರೇಕ್ ನೀಡಿದ ಬೆನ್ನಲ್ಲೇ ರಾಜ್ಯದ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕೊಳೆ ರೋಗದ ಆತಂಕದಲ್ಲಿದ್ದ ಕಾಫಿ ಬೆಳೆಗಾರರು ಸಹ ನಿಟ್ಟುಸಿರು ಬಿಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





