Breaking News

ಅಕ್ರಮ ಗಣಿಗಾರಿಕೆಗೆ ಬ್ರೇಕ್‌ಹಾಕಲು ಹೋದ ಡಿಎಸ್ಪಿ ಕಸದ ತೊಟ್ಟಿಯಲ್ಲಿ ಶವವಾಗಿ ಪತ್ತೆ


ಹರ್ಯಾಣ: ಇಲ್ಲಿನ ಅಕ್ರಮ ಗಣಿಗಾರಿಕೆ ಮಾಫಿಯಾ ಡಿಎಸ್ಪಿ ಸುರೇಂದ್ರ ಸಿಂಗ್ ಅವರನ್ನು ಬಲಿ ಪಡೆದಿದೆ. ಪೊಲೀಸ್ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ದೇಹವು ತೆರೆದ ಕಸದ ತೊಟ್ಟಿಯಲ್ಲಿ ಪತ್ತೆಯಾಗಿದೆ. ಈ ಘಟನೆಯ ನಂತರ ಆಡಳಿತ ವಲಯದಲ್ಲಿ ಅಲ್ಲೋಲಕಲ್ಲೋಲ ಉಂಟಾಗಿದೆ. ಅದೇ ಸಮಯದಲ್ಲಿ, ಇಡೀ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆ ನಿಯೋಜಿಸಲಾಗಿದೆ.

ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗ ಸುಳಿವು ಸಿಕ್ಕ ಬೆನ್ನಲ್ಲೇ ಡಿಎಸ್‌ಪಿ ಸುರೇಂದರ್ ಕುಮಾರ್ ಬಿಷ್ಣೋಯ್ ಅವರು ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ತೌಡು ಬೆಟ್ಟದಲ್ಲಿ ದಾಳಿ ನಡೆಸಲು ತೆರಳಿದ್ದರು. ಪ್ರತ್ಯಕ್ಷದರ್ಶಿಯೊಬ್ಬರು ಈ ಬಗ್ಗೆ ಮಾತನಾಡುತ್ತಾ ಡಿಎಸ್ಪಿ ತಮ್ಮ ಅಧಿಕೃತ ವಾಹನದ ಬಳಿ ನಿಂತಿದ್ದರು. ಈ ವೇಳೆ 12:10 ರ ಸುಮಾರಿಗೆ ಅವರು ಅಕ್ರಮ ಕಲ್ಲುಗಣಿಗಾರಿಕೆ ವಸ್ತುಗಳನ್ನು ಸಾಗಿಸುತ್ತಿದ್ದ ಡಂಪರ್ ನಿಲ್ಲಿಸುವಂತೆ ಚಾಲಕನಿಗೆ ಸೂಚಿಸಿದ್ದರು. ಆದರೆ ಡಂಪರ್ ಚಾಲಕ ಪೊಲೀಸ್ ಅಧಿಕಾರಿ ಮೇಳೆ ಡಂಪರ್ ಹತ್ತಿಸಿದ್ದಾನೆ ಎಂದಿದ್ದಾರೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *