ಮೈಸೂರು: ಆಷಾಢ ಮಾಸದಲ್ಲಿ ಮೈಸೂರಿನ ನಾಡದೇವತೆ ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ-ಪುನಸ್ಕಾರಗಳಿಂದ ತಿಂಗಳಿಡೀ ಸಂಭ್ರಮ ಕಳೆಕಟ್ಟುತ್ತಿರುತ್ತದೆ. ಆಷಾಢ ಶುಕ್ರವಾರವಂತೂ ದೇವಿಗೆ ವಿಶೇಷ ಪೂಜೆ ಸಲ್ಲಿಸಲು ಭಕ್ತರು ತುಂಬಿತುಳುಕುತ್ತಿರುತ್ತಾರೆ.
ಇಂದು ಜುಲೈ 20ರಂದು ಚಾಮುಂಡೇಶ್ವರಿಯ ವರ್ಧಂತಿ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವರ್ಧಂತಿ ಸಂಭ್ರಮ, ಸಡಗರ ಮನೆ ಮಾಡಿದೆ. ತಾಯಿ ಚಾಮುಂಡೇಶ್ವರಿ ಉತ್ಸವಮೂರ್ತಿ ಮೆರವಣಿಗೆ ಕಣ್ತುಂಬಿಕೊಳ್ಳಲು ಭಕ್ತಸಾಗರ ಕಾತುರದಿಂದ ಕಾಯುತ್ತಿದೆ. ರಾಜರ ಚಿನ್ನದ ಪಲ್ಲಕ್ಕಿಗೆ ಹೂವಿನ ಅಲಂಕಾರ ಮಾಡಲಾಗಿದೆ.
ದೇವಸ್ಥಾನ ಸುತ್ತ ಮೆರವಣಿಗೆ ನಡೆಯಲಿದ್ದು ಪಕ್ಕವಾದ್ಯ ಮತ್ತಷ್ಟು ಶೋಭೆಯನ್ನು ತರುತ್ತದೆ. ಮೈಸೂರು ರಾಜ ಯದುವೀರ ಒಡೆಯರ್, ಅವರ ಪತ್ನಿ, ರಾಜಮಾತೆ ಪ್ರಮೋದಾ ದೇವಿ, ಮಾಜಿ ಸಚಿವ ಜಿ ಟಿ ದೇವೇಗೌಡ, ಶಾಸಕರು ಇಂದು ಬೆಳಗ್ಗೆಯೇ ದೇಗುಲಕ್ಕೆ ತೆರಳಿ ದೇವಿಯ ರಥ ಎಳೆಯುವ ಕಾರ್ಯಕ್ರಮದಲ್ಲಿ ಭಾಗಿಯಾದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





