ರಾಮನಗರ: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಾತನಾಡಿದ್ದು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದೇವೇಗೌಡರು ಪ್ರಧಾನಿಗಳಾಗಿ ಕೆಂಪು ಕೋಟೆ ಮೇಲೆ ಬಾವುಟ ಹಾರಿಸಿದರು.
ಈಗ ದೇವೇಗೌಡರಿಗೆ 90 ವರ್ಷ ಆಗಿದೆ. ಆದ್ರೆ ಅವರಿಗೆ ರಾಜ್ಯದ ಚಿಂತೆ. ಕಾಂಗ್ರೆಸ್ನವರಿಗೆ ಸೋನಿಯಾ ಗಾಂಧಿ ಚಿಂತೆ, ಬಿಜೆಪಿ ಅವರಿಗೆ ಮೋದಿ ಚಿಂತೆ ಎಂದು ವ್ಯಂಗ್ಯ ಮಾಡಿದರು. JDSನವರಿಗೆ ರೈತರ ಹಾಗೂ ಕನ್ನಡ ನಾಡಿನ ಜನತೆ ಚಿಂತೆ ಎಂದು ದಳಪತಿಗಳನ್ನು ಹಾಡಿ ಹೊಗಳಿದರು.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೃದಯ ದಯವೇ ಧರ್ಮದ ಮೂಲವಯ್ಯ, ಧಯವೇ ಧರ್ಮದ ಮಂತ್ರವಯ್ಯ. 2022ರಲ್ಲಿ ಡಿಸೆಂಬರ್ ಗೆ ಚುನಾವಣೆ ಬರತ್ತೆ, 2023ಕ್ಕೆ ಕುಮಾರಸ್ವಾಮಿ ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





