Breaking News

ರಮೇಶ ಕುಮಾರ್ ಗೆ ಟಾಂಗ್ ಕೊಟ್ಟ ಡಾ.ಕೆ.ಸುಧಾಕರ್‌

ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಕೋಲಾರ ಕ್ಷೇತ್ರದಲ್ಲಿ ಉತ್ತರಕುಮಾರನ ತಂಡ ಖೆಡ್ಡಾ ತೋಡುತ್ತಿದೆ. ಆ ಖೆಡ್ಡಾಕ್ಕೆ ಸಿದ್ದರಾಮಯ್ಯ ಬೀಳಬಾರದೆಂದು ಅವರ ಅಭಿಮಾನಿಯಾಗಿ ಕೇಳಿಕೊಳ್ಳುತ್ತಿದ್ದೇನೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಬಿಜೆಪಿಯ ಸಾಧನಾ ಸಮಾವೇಶದ ಪೂರ್ವಭಾವಿಯಾಗಿ ಗುರುವಾರ ಇಲ್ಲಿ ನಡೆದ ಕೋಲಾರ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ನಾನು ಸಿದ್ದರಾಮಯ್ಯ ಅವರನ್ನು ಬಹಳ ಹತ್ತಿರದಿಂದ ನೋಡಿದ್ದೇನೆ.

ಉತ್ತರ ಕುಮಾರನಂಥ ನೂರು ಜನ ಹೋಗಿ ಆಹ್ವಾನಿಸಿದರೂ ಅವರು ಕೋಲಾರ ಕ್ಷೇತ್ರಕ್ಕೆ ಬರುವುದಿಲ್ಲ. ಆದರೆ, ಮಂತ್ರಿ ಆಗುವ ಮುನ್ನ ಸಿದ್ದರಾಮಯ್ಯ ವಿರುದ್ಧ ಈ ಉತ್ತರಕುಮಾರ ಏನೆಲ್ಲಾ ಮಾತನಾಡಿದ್ದರು ಎಂಬುದು ನನಗೆ ಗೊತ್ತು’ ಎಂದು ಅವರು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *