ಮೈಸೂರು : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 2,446 ಅರ್ಹ ಫಲಾನುಭವಿಗಳಿಗೆ ಮೈಸೂರು ವಿಮಾನ ನಿಲ್ದಾಣದ ಹಿಂಭಾಗದ ಮಂಡಕಳ್ಳಿ-ದಡದಹಳ್ಳಿ ರಸ್ತೆಯಲ್ಲಿ ವಸತಿ ಸಚಿವ ವಿ.ಸೋಮಣ್ಣ ಅವರು ಜು.23ರಂದು ಸಂಜೆ 4 ಗಂಟೆಗೆ ಬೃಹತ್ ವಸತಿ ಸಮುಚ್ಚಯಕ್ಕೆ ಶಂಕುಸ್ಥಾಪನೆ ನೆರವೇರಿಸುವರು.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಸರ್ಕಾರಿ ಸ್ವಾಮ್ಯದ ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್ (ಆರ್ ಜಿಎಚ್ ಸಿಎಲ್) ಅನುಷ್ಠಾನಗೊಳಿಸಲಿರುವ ಬೃಹತ್ ವಸತಿ ಯೋಜನೆಯನ್ನು ಪಿಎಂಎವೈ-ಎಚ್ ಎಫ್ ಎ (ನಗರ) – ಪ್ರಧಾನ ಮಂತ್ರಿ ಆವಾಸ್ ಯೋಜನೆ – ಎಲ್ಲರಿಗೂ ವಸತಿ – ಯೋಜನೆ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





