ಬೆಂಗಳೂರು : ರಾಜ್ಯದಲ್ಲಿ ಐದು ತಿಂಗಳ ಬಳಿಕ ಕೊರೋನಾ ಸೋಂಕು ಪ್ರಕರಣಗಳು ಒಂದೂವರೆ ಸಾವಿರದಷ್ಟು ವರದಿಯಾಗಿವೆ. ಇದೇ ವೇಳೆ ಸಕ್ರಿಯ ಸೋಂಕು ಪ್ರಕರಣಗಳು ಎಂಟು ಸಾವಿರ ಗಡಿ ದಾಟಿವೆ. ಗುರುವಾರ 1552 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 1384 ಮಂದಿ ಗುಣಮುಖರಾಗಿದ್ದಾರೆ.
ರಾಯಚೂರಿನಲ್ಲಿ 80 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದಾರೆ. ಸದ್ಯ 8,033 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. 33 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ 4.6 ರಷ್ಟು ದಾಖಲಾಗಿದೆ. ಬುಧವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು ಒಂದೂವರೆ ಸಾವಿರ ಹೆಚ್ಚು ನಡೆದಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





