ನವದೆಹಲಿ : ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗಾ’ ಅಭಿಯಾನವನ್ನ ಪ್ರಾರಂಭಿಸುವುದರೊಂದಿಗೆ, ಭಾರತದ ಧ್ವಜ ಸಂಹಿತೆ 2002ರಲ್ಲಿ ಬದಲಾವಣೆಗಳನ್ನ ತಂದಿದೆ. ಇನ್ನೀದು ತ್ರಿವರ್ಣ ಧ್ವಜವನ್ನ ಹಗಲು ಮತ್ತು ರಾತ್ರಿ ಸಾರ್ವಜನಿಕರಿಗೆ ಹಾರಿಸಲು ಅನುಮತಿ ನೀಡುತ್ತದೆ.
ಪ್ರಗತಿಪರ ಸ್ವತಂತ್ರ ಭಾರತದ 75ನೇ ವರ್ಷದ ಸ್ಮರಣಾರ್ಥ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರವರೆಗೆ ‘ಹರ್ ಘರ್ ತಿರಂಗಾ’ ಆಚರಿಸಲಾಗುವುದು.
ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಭಾರತೀಯ ರಾಷ್ಟ್ರಧ್ವಜದ ಪ್ರದರ್ಶನ, ಹಾರಿಸುವಿಕೆ ಮತ್ತು ಬಳಕೆಯು ಭಾರತದ ಧ್ವಜ ಸಂಹಿತೆ, 2002 ಮತ್ತು ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ, 1971ರ ಅಡಿಯಲ್ಲಿ ನಿಯಂತ್ರಿಸಲ್ಪಡುತ್ತದೆ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





