Breaking News

ಈ ಕಾರ್ಖಾನೆಯು ಲೈಸನ್ಸ್ ಪಡೆದಿಲ್ಲ, ಕಾನೂನು ಬಾಹಿರವಾಗಿ ಕೈಗಾರಿಕಾ ನಡೆಸುವವರ ವಿರುದ್ದ ಕ್ರಮಕೈಗೊಳ್ಳಲಾಗುತ್ತದೆ : ಹಾಲಪ್ಪ ಆಚಾರ್


ಹುಬ್ಬಳ್ಳಿ: ತಾರಿಹಾಳ ಕಾರ್ಖಾನೆ ಅವಘಡ ಹಿನ್ನೆಲೆ ನಗರದ ಕಿಮ್ಸ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಭೇಟಿ ನೀಡಿದರು.

ನಗರದಲ್ಲಿಯಿಂದು ಮಾತನಾಡಿದ ಅವರು, ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ. ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಲಾಗಿದೆ.ಮೃತರ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ. ಅಗ್ನಿ ಅನಾಹುತಕ್ಕೆ ಕಾರಣವಾಗಿರುವ ಈ ಕಾರ್ಖಾನೆಯು ಲೈಸನ್ಸ್ ಪಡೆದಿಲ್ಲ. ಕಾನೂನು ಬಾಹಿರವಾಗಿ ಕೈಗಾರಿಕಾ ನಡೆಸುವವರ ವಿರುದ್ದ ಕ್ರಮಕೈಗೊಳ್ಳಲಾಗುತ್ತದೆ. ದುರಂತ ಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸೇರಿದಂತೆ ಶಾಮೀಲಾದವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತೇವೆ.ಕಾರ್ಖಾನೆ ಎಂದ ಮೇಲೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು.ಆದ್ರೆ, ಇಲ್ಲಿ ಯಾವುದೇ ಮುಂಜಾಗ್ರತೆಯ ಕೈಗೊಂಡಿಲ್ಲ ಎನ್ನುವುದು ಮೇಲ್ನೋಟಕ್ಕೆ ಕಾಣುತ್ತದೆ.ಇದರಿಂದ ಮೂವರು ಜೀವ ಕಳೆದುಕೊಳ್ಳುವಂತಾಯಿತು ಎಂದರು.

ಮತ್ತೇ ಮುಂದುವರೆದ ಮಾತನಾಡಿದ ಅವರು, ಇದು ಸಾಮಾನ್ಯವಲ್ಲ, ಹೋದ ಜೀವ ಮತ್ತೆ ಬರಲ್ಲ. ಕಾರ್ಖಾನೆಯಲ್ಲಿ ಒಟ್ಟು 14 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದರು.ನಿನ್ನೆ ಘಟನೆಯಲ್ಲಿ 8 ಜನರಿದ್ದರು. ಅನಧಿಕೃತ ಕಾರ್ಖಾನೆಗಳ ಸಮೀಕ್ಷೆ ಮಾಡಲು ಸೂಚನೆ ನೀಡಿದ್ದೇನೆ.ಜಿಲ್ಲೆಯಲ್ಲಿ 14 ಕೈಗಾರಿಕಾ ಪ್ರದೇಶಗಳಿದ್ದು, ಲೈಸನ್ಸ್ ಪಡೆಯದೇ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳ ಸಮೀಕ್ಷೆ ನಡೆಸಲು ಜಿಲ್ಲಾಡಳಿತ ಮುಂದಾಗಿದೆ.ಈ ಕುರಿತು ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.ಸ್ಫೋಟದಲ್ಲಿ ಮೃತರ ಮಕ್ಕಳ ಆರೈಕೆ ಹಿನ್ನಲೆ.ಬಾಲವಿಕಾಸ ಯೋಜನೆಯಡಿ ಮೂರು ವರ್ಷ ಅನುದಾನ ಒದಗಿಸಲಾಗುತ್ತದೆ ಎಂದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *