ಬೆಂಗಳೂರು: ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಬಂಪರ್ ಕೊಡುಗೆಯನ್ನು ಘೋಷಿಸಿದೆ. ವಿವಿಧ ಸಹಾಯಧನ ಯೋಜನೆ ಸೇರಿದಂತೆ ಮಹತ್ವದ ಕೊಡುಗೆಗಳನ್ನು ನೀಡುತ್ತಿರೋದಾಗಿ ತಿಳಿಸಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನೀಲ್ ಕುಮಾರ್ ಅವರು, ಕಾರ್ಮಿಕರಿಗೆ ಹೆರಿಗೆ ಸಹಾಯಧನವನ್ನು ಗಂಡು-ಹೆಣ್ಣು ಎನ್ನುವ ಭೇದ-ಭಾವ ಇಲ್ಲದೇ 50 ಸಾವಿರ ರೂಗಳಿಗೆ ಹೆಚ್ಚಳ ಮಾಡಲಾಗಿದೆ ಎಂದಿದ್ದಾರೆ. ಅಂತಿಮ ಸಂಸ್ಕಾರ ವೆಚ್ಚ ಸಹಾಯಧನ ಮೊತ್ತವನ್ನು ರೂ.50 ಸಾವಿರದಿಂದ 71 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. ವೈದ್ಯಕೀಯ ಸಹಾಯಧನ ರೂ.10 ಸಾವಿರದಿಂದ 20 ಸಾವಿರಕ್ಕೆ ಏರಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





