ಬೀದರ್: ಜನತಾ ದಳ ರಾಜ್ಯ ಘಟಕದ ಉಪಾಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಸೀಮ್ ಪಟೇಲ್ ಜೆಡಿಎಸ್ಗೆ ರಾಜೀನಾಮೆ ನೀಡಿದ್ದಾರೆ. ಜುಲೈ 28ರಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಬೀದರ್ ದಕ್ಷಿಣ ಕ್ಷೇತ್ರದ ಮನ್ನಾಎಖ್ಖೇಳ್ಳಿಯ ಜರೀನ್ ಫಂಕ್ಷನ್ ಹಾಲ್ನಲ್ಲಿ ಜುಲೈ 28ರಂದು ಬೆಳಿಗ್ಗೆ 11 ಗಂಟೆಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ವಿಷ್ಣುರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ಕಲಬುರಗಿ ವಿಭಾಗೀಯ ಪ್ರಮುಖರಾದ ವಿಜಯ ಶರ್ಮಾ, ಪಕ್ಷದ ಪ್ರಮುಖ ಮುಖ್ಯಮಂತ್ರಿ ಚಂದ್ರು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಮಾಲಗಾರ ಮುಂದಾಳತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





