ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರ ಶುರುವಾಗಿದ್ದು, ರಾಜ್ಯದ ಹಲವಡೆ ರಾತ್ರಿಯೀಡಿ ಭಾರೀ ಮಳೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಜನಜೀವನ ಅಸ್ವಸ್ಥಗೊಂಡಿದೆ.
ಮೈಸೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಗದಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಡರಾತ್ರಿ ಭಾರೀ ಮಳೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ. ಗದಗ ಜಿಲ್ಲೆಯಲ್ಲಿ ರಾತ್ರಿಯಿಡೀ ಭಾರಿ ಮಳೆಸುರಿದಿದ್ದು, ರಾಜಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಮನೆಗಳಿಗೆ ನುಗ್ಗಿದೆ. ಬೆಟಗೇರಿಯ ವಾರ್ಡ್ ನಂಬರ್ 4ರ ಮಂಜುನಾಥ್ ನಗರ, ವಾಲ್ಮೀಕಿ ಅಂಬೇಡ್ಕರ್ ಬಡಾವಣೆಯಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





