ದಾವಣಗೆರೆ : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವಕ್ಕೆ ಬೆಣ್ಣೆ ನಗರಿಯಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ದಾವಣಗೆರೆ ಹೊರಭಾಗದ 50 ಎಕರೆ ಜಾಗದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಸಧ್ಯ ವೇದಿಕೆಯ ಶೇ.50 ರಷ್ಟು ನಿರ್ಮಾಣ ಕಾರ್ಯ ಪೂರ್ಣವಾಗಿದೆ.
ಇಂದು ಅಮೃತ ಮಹೋತ್ಸವ ಸಮಿತಿ ನಾಯಕರಾದ ಮಾಜಿ ಸಚಿವರಾದ ಎಚ್ ಸಿ ಮಹದೇವಪ್ಪ, ಎಚ್ ಎಂ ರೇವಣ್ಣ, ಬಿಎಲ್ ಶಂಕರ್, ಶಾಸಕ ಬೈರತಿ ಸುರೇಶ್ ಹಾಗೂ ಸ್ಥಳೀಯ ಮುಖಂಡರು ಕಾರ್ಯಕ್ರಮ ಸಿದ್ಧತೆ ಪರಿಶೀಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





