ಮಂಗಳೂರು: ಮುಖ್ಯಮಂತ್ರಿ ಭೇಟಿಯ ಬೆನ್ನಲ್ಲೇ ಸುರತ್ಕಲ್ನಲ್ಲಿ ನಡೆದ ಫಾಜಿಲ್ ಹತ್ಯೆಗೆ ನೇರ ಹೊಣೆ ಮುಖ್ಯಮಂತ್ರಿ ಬೊಮ್ಮಾಯಿ. ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಭೇಟಿಯ ಸಂದರ್ಭ ತೋರಿದ ಸಾರ್ವಜನಿಕ ಹೊಣೆಗೇಡಿತನವೇ ಕೊಲೆಗಡುಕರಿಗೆ ಧೈರ್ಯ ನೀಡಿದೆ ಎಂದು ಡಿವೈಎಫ್ಐ ರಾಜ್ತ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ನಡೆಯುತ್ತಿರುವ ಅಮಾಯಕರ ಸರಣಿ ಕೊಲೆಗಳಿಗೆ ಬೊಮ್ಮಾಯಿ ಸರ್ಕಾರವೇ ಕಾರಣ. ನಿರ್ಲಜ್ಜ ಕೋಮುವಾದಿ ಆಡಳಿತದ ಕರ್ನಾಟಕ ಮಾದರಿಯೊಂದನ್ನು ಬೊಮ್ಮಾಯಿ ನಿರ್ಮಿಸಿ ಬಿಟ್ಟರು. ಅವರಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಬಾರದು. ರಾಜಿನಾಮೆ ಕೊಟ್ಟು ನಿರ್ಗಮಿಸಲಿ ಎಂದು ಮುನೀರ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





