ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಆಗಾಗ ವಿವಾದಕ್ಕೆ ಸಿಲುಕಿ ಸುದ್ದಿಯಾಗುತ್ತಿರುತ್ತಾರೆ. ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಹಲವು ಆರೋಪಗಳು ಕೇಳಿಬಂದು ನಂತರ ಬೆಂಗಳೂರಿಗೆ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆಗೊಂಡರು.
ಇದೀಗ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಕೇಳಿಬಂದ ಆರೋಪಗಳಿಗೆ ಸಂಬಂಧಪಟ್ಟಂತೆ ಅವರಿಗೆ ನೊಟೀಸ್ ನೀಡಲಾಗಿದ್ದು, ಸರ್ಕಾರದ ಕಾರ್ಯದರ್ಶಿ ಡಾ.ಜೆ.ರವಿಶಂಕರ್ ಅವರು ನೊಟೀಸ್ ಕಳುಹಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಖುದ್ದು ಕಚೇರಿಗೆ ಹಾಜರಾಗಿ ಆರೋಪಗಳಿಗೆ ಉತ್ತರಿಸಲು ಅವರಿಗೆ ಸೂಚಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





