Breaking News

ವಿಚಾರಣೆಗೆ ಹಾಜರುವಾಗುವಂತೆ ಐಎಎಸ್ ಅಧಿಕಾರಿಗೆ ನೋಟಿಸ್


ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಆಗಾಗ ವಿವಾದಕ್ಕೆ ಸಿಲುಕಿ ಸುದ್ದಿಯಾಗುತ್ತಿರುತ್ತಾರೆ. ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಹಲವು ಆರೋಪಗಳು ಕೇಳಿಬಂದು ನಂತರ ಬೆಂಗಳೂರಿಗೆ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆಗೊಂಡರು.

ಇದೀಗ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಕೇಳಿಬಂದ ಆರೋಪಗಳಿಗೆ ಸಂಬಂಧಪಟ್ಟಂತೆ ಅವರಿಗೆ ನೊಟೀಸ್ ನೀಡಲಾಗಿದ್ದು, ಸರ್ಕಾರದ ಕಾರ್ಯದರ್ಶಿ ಡಾ.ಜೆ.ರವಿಶಂಕರ್‌ ಅವರು ನೊಟೀಸ್ ಕಳುಹಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಖುದ್ದು ಕಚೇರಿಗೆ ಹಾಜರಾಗಿ ಆರೋಪಗಳಿಗೆ ಉತ್ತರಿಸಲು ಅವರಿಗೆ ಸೂಚಿಸಲಾಗಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *