ಹುಬ್ಬಳ್ಳಿ: ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಆರ್ಪಿಎಫ್ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ .
ಆರ್ಪಿಎಫ್ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ನೇತೃತ್ವದ ವಿಶೇಷ ತಂಡ ಧಾರವಾಡದ ರೈಲ್ವೆ ಮೈದಾನ ಹಾಗೂ ವಿವಿಧ ಸ್ಥಳಗಳಲ್ಲಿ ನಿರಂತರವಾಗಿ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದರು .
ಖಚಿತ ಮಾಹಿತಿ ಮೇರೆಗೆ ಮರಗಳ್ಳರನ್ನು ಪೊಲೀಸರು ಬಂಧನ ಮಾಡಿದ್ದಾರೆ . ಈ ಮರಗಳ್ಳರು ತಡರಾತ್ರಿ ವೇಳೆಯಲ್ಲೇ ಕಳ್ಳತನ ಮಾಡುತ್ತಿದ್ದರು .
ಆರೋಪಿಗಳು ಮರಗಳನ್ನು ಕಡಿಯುವುದು ಮತ್ತು ಕೊಂಡುಯ್ಯುವುದನ್ನು ಮಾಹಿತಿಯನ್ನು ಪಡೆದ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂರು ಆರೋಪಿಗಳನ್ನು ಬಂಧಿಸಿದ್ದಾರೆ .
ಈ ಕುರಿತು ಹು – ಧಾ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿವೆ . ರೈಲ್ವೆ ಆಸ್ತಿ ಕಾಯ್ದೆಯಡಿ ದಾಖಲಾದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಆರ್ಪಿಎಫ್ ಪೊಲೀಸರು ತನಿಖೆ ಮಾಡುತ್ತಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news





