Breaking News

ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ


ಹುಬ್ಬಳ್ಳಿ : ಪಂಚಮಸಾಲಿ ಸಮಾಜದ 2ಎ ಹಾಗೂ ಲಿಂಗಾಯತ ಎಲ್ಲ ಸಮಾಜಗಳನ್ನು ಕೇಂದ್ರ ಸರ್ಕಾರ ಒಬಿಸಿ ಮಿಸಲಾತಿಗೆ ಸೇರ್ಪಡಿಸುವಂತೆ ಹಕ್ಕೊತ್ತಾಯ ನೀಡಬೇಕೆಂದು ಒತ್ತಾಯಿಸಿ ಹುಬ್ಬಳ್ಳಿಯ ನೆಹರೂ ಮೈದಾನದಿಂದ ಕಿತ್ತೂರ ಚೆನ್ನಮ್ಮ ವೃತ್ತದವರೆಗೆ ಲಿಂಗಾಯತ ಸಮಾಜ ಸಾವಿರಾರು ಜನರು ಬೃಹತ್ ಪ್ರತಿಭಟನೆ ಮಾಡಿದರು.

ಲಿಂಗಾಯತ ಸಮಾಜಕ್ಕೆ ಮೀಸಲಾತಿ ಕೊಡುವ ವಿಷಯಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿಗಳು ನಾಲ್ಕನೇ ಬಾರಿ ಮಾತು ಕೊಟ್ಟಿದ್ದರು. ಇನ್ನೂವರೆಗೂ ಈ ಬಗ್ಗೆ ವಿಚಾರ ತಗದಿಲ್ಲಾ ಎಂದು ವಿರೋಧಿಸಿ, ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಗರದ ಚನ್ನಮ್ಮ ವೃತ್ತದಿಂದ ನೆಹರು ಮೈದಾನದ ವರೆಗೆ ರ‌್ಯಾಲಿ ಮಾಡುವುದರ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟರು. ಈ ಸಮಾವೇಶದಲ್ಲಿ ಹಲವಾರು ಜಿಲ್ಲೆಗಳಿಂದ ಲಿಂಗಾಯತ ಸಮಾಜದ ಸಾವಿರಾರು ಜನರು ಭಾಗವಹಿಸಿದ್ದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *