Breaking News

ಇಸ್ಪೀಟ್ ಆಡಿದ್ದ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ನಾಲ್ವರು ಅಮಾನತು



ಹುಬ್ಬಳ್ಳಿ : ಇಸ್ಪೀಟ್ ಆಡಿದ್ದ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ನಾಲ್ವರು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್ ಆದೇಶ ಹೊರಡಿಸಿದ್ದಾರೆ.

ನಗರದ ಅಕ್ಷಯ ಕಾಲನಿಯ ಮನೆಯೊಂದರಲ್ಲಿ ಮೊನ್ನೆ ರಾತ್ರಿ ಇಸ್ಪೀಟ್ ಜೂಜಾಟವಾಡಿದ್ದ ಪ್ರಕರಣದ ಈ ನಾಲ್ವರು ಪೊಲೀಸ್ ಅಧಿಕಾರಿ ಸಿಬ್ಬಂದಿ ಅಮಾನತು ಮಾಡಲಾಗಿದೆ.
ಹುಬ್ಬಳ್ಳಿ-ಧಾರವಾಡ ಸಿಎಆರ್ ರಿಸರ್ವ್ ಪೊಲೀಸ್ ಇನ್‌ಸ್ಪೆಕ್ಟರ್ (ಆರ್ ಪಿಐ) ಸಂತೋಷ ಬೋಜಪ್ಪಗೋಳ, ಸಿಎಆರ್ ಹೆಡ್ ಕಾನ್ ಸ್ಟೆಬಲ್‌ಗಳಾದ ಮುತ್ತಪ್ಪ ಕಾಟನಾಯಕ, ನವೀನ ತೋಪಲಕಟ್ಟಿ, ಪೂರ್ವ ಸಂಚಾರ ಠಾಣೆಯ ಕಾನ್‌ಸ್ಟೆಬಲ್‌ ಬಸವಣ್ಯಪ್ಪ ಬಾವಿಹಾಳ ಹಾಗೂ ಸಿಎಆರ್‌ನ ನಿವೃತ್ತ ಹೆಡ ಕಾನ್‌ಸ್ಟೆಬಲ್ ಶ್ರೀಕಾಂತ ಗೋಂದಕರ ಅಮಾನತುಗೊಂಡ ಸಿಬ್ಬಂದಿಗಳು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *