ಹುಬ್ಬಳ್ಳಿ : ಇಸ್ಪೀಟ್ ಆಡಿದ್ದ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ನಾಲ್ವರು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್ ಆದೇಶ ಹೊರಡಿಸಿದ್ದಾರೆ.
ನಗರದ ಅಕ್ಷಯ ಕಾಲನಿಯ ಮನೆಯೊಂದರಲ್ಲಿ ಮೊನ್ನೆ ರಾತ್ರಿ ಇಸ್ಪೀಟ್ ಜೂಜಾಟವಾಡಿದ್ದ ಪ್ರಕರಣದ ಈ ನಾಲ್ವರು ಪೊಲೀಸ್ ಅಧಿಕಾರಿ ಸಿಬ್ಬಂದಿ ಅಮಾನತು ಮಾಡಲಾಗಿದೆ.
ಹುಬ್ಬಳ್ಳಿ-ಧಾರವಾಡ ಸಿಎಆರ್ ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್ (ಆರ್ ಪಿಐ) ಸಂತೋಷ ಬೋಜಪ್ಪಗೋಳ, ಸಿಎಆರ್ ಹೆಡ್ ಕಾನ್ ಸ್ಟೆಬಲ್ಗಳಾದ ಮುತ್ತಪ್ಪ ಕಾಟನಾಯಕ, ನವೀನ ತೋಪಲಕಟ್ಟಿ, ಪೂರ್ವ ಸಂಚಾರ ಠಾಣೆಯ ಕಾನ್ಸ್ಟೆಬಲ್ ಬಸವಣ್ಯಪ್ಪ ಬಾವಿಹಾಳ ಹಾಗೂ ಸಿಎಆರ್ನ ನಿವೃತ್ತ ಹೆಡ ಕಾನ್ಸ್ಟೆಬಲ್ ಶ್ರೀಕಾಂತ ಗೋಂದಕರ ಅಮಾನತುಗೊಂಡ ಸಿಬ್ಬಂದಿಗಳು.
bigtvnews | Hubli Dharwad News | Kannada News | Karnataka News Hubli News | News In Hubli | Local news





