Breaking News

ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ‌ 5 ಲಕ್ಷ ಪರಿಹಾರ ನೀಡಿದ ಮಾಜಿ ಸಿಎಂ


ಮಂಗಳೂರು: ಇತ್ತೀಚಿಗೆ ಬರ್ಬರವಾಗಿ ಹತ್ಯೆಯಾಗಿರುವ ಬಿಜೆಪಿಯ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು, ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರದ ಚೆಕ್ ನೀಡಿದ್ದಾರೆ.

ಈ ಸಂದರ್ಭದಲ್ಲಿ ಪ್ರವೀಣ್ ಕುಟುಂಬಕ್ಕೆ ಅವರು ಸಾಂತ್ವನ ಹೇಳಿದ್ದಾರೆ. ನಂತರ ಮಾಧ್ಯಮದವರ ಜತೆ ಮಾತನಾಡಿದ ಅವರು, ಪ್ರವೀಣ್​ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ. ಕುಟುಂಬ ಸಂಪೂರ್ಣ ಕಷ್ಟದಲ್ಲಿ ಇರೋದು ಮಾತುಕತೆ ನಂತರ ನನಗೆ ತಿಳಿದಿದೆ ಎಂದರು.

ಸಾವಿಗೆ ಕಾರಣಕರ್ತರಾದವರಿಗೆ ಕಠಿಣ ಶಿಕ್ಷೆ ಆಗಬೇಕು. ಕುಟುಂಬದ ಅಭಿಪ್ರಾಯ ಕೂಡ ಇದೇ ಆಗಿದೆ. ಅವರು ತಮ್ಮ ನೋವನ್ನು ನನ್ನೊಂದಿಗೆ ಹಂಚಿಕೊಂಡಿದ್ದಾರೆ. ಕಾಟಾಚಾರದ ತನಿಖೆ ಆಗಬಾರದು. ವಿಧವೆ ತಂಗಿಯನ್ನು ಸಾಕುವ ಜವಾಬ್ದಾರಿ ಇದೆ ಎಂದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *