ತುಮಕೂರು: ವಿದ್ಯುತ್ ಶಾಕ್ ಹೊಡೆದು ವಾಟರ್ ಮ್ಯಾನ್ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೀರಮ್ಮನಹಳ್ಳಿಯಲ್ಲಿ ನಡೆದಿದೆ.
ಈರಣ್ಣ (58) ಮೃತ ದುರ್ದೈವಿ. ಇಂದು ಬೆಳಗ್ಗೆ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ಪಂಪ್ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲೇ ಈರಣ್ಣ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





