ಬೆಂಗಳೂರು : ಜಾತ್ಯತೀತ ಜನತಾದಳ ಪಕ್ಷದ (JDS) ರಾಜ್ಯ ಮಟ್ಟದ ಸಾಂಸ್ಥಿಕ ಚುನಾವಣೆ ಪೂರ್ಣಗೊಂಡಿದ್ದು, ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ಸಾಂಸ್ಥಿಕ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ . ಕೇಂದ್ರದ ಮಾಜಿ ಸಚಿವರಾದ ಸಿ . ಎಂ . ಇಬ್ರಾಹಿಂ ಅವರು ರಾಜ್ಯಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ . ಅವರ ನೇತೃತ್ವದಲ್ಲಿ ಸಂಘಟನೆ ಮತ್ತಷ್ಟು ಬಲಿಷ್ಠವಾಗಲಿ ಹಾಗೂ ಹೊಸ ಹುರುಪಿಗೆ ನಾಂದಿಯಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





