Breaking News

ಕೇಂದ್ರ ಘಟಕ ವ್ಯವಸ್ಥಾಪಕ ಹೃದಯಾಘಾತದಿಂದ ನಿಧನ


ದಾವಣಗೆರೆ : ಕೆಎಸ್‌ಆರ್‌ಟಿಸಿ ಬೆಂಗಳೂರು ಕೇಂದ್ರ ಘಟಕ ವ್ಯವಸ್ಥಾಪಕ ಎಚ್‌.ಸಿ. ತುಷಾರ್‌ (33)  ಬಸ್‌ ನಿಲ್ದಾಣದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸಂಸ್ಥೆಯ ಸಿಬ್ಬಂದಿಯ ಹಳೆ ಪ್ರಕರಣವೊಂದರ ವಿಚಾರಣೆ ಸಂಬಂಧ ಶಿರಸಿಗೆ ಬಂದಿದ್ದ ಅವರು, ಬೆಂಗಳೂರಿಗೆ ವಾಪಸಾಗುವಾಗ ಮಾರ್ಗ ಮಧ್ಯೆ ದಾವಣಗೆರೆಯ ಬಸ್‌ ನಿಲ್ದಾಣದಲ್ಲಿ ನಿಧನರಾಗಿದ್ದಾರೆ. ತಲೆ ಸುತ್ತು ಕಾಣಿಸಿಕೊಂಡು ಆಯಾಸಗೊಂಡಿದ್ದ ಅವರನ್ನು ಬಸ್‌ನ ನಿರ್ವಾಹಕರು ಆಸ್ಪತ್ರೆಗೆ ಕರೆದೊಯ್ಯಲು ಅಣಿಯಾಗುತ್ತಿದ್ದಂತೆಯೇ, ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅವರಿಗೆ ಪತ್ನಿ ಹಾಗೂ 4 ತಿಂಗಳ ಮಗು ಇದೆ. ಮೃತದೇಹವನ್ನು ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಮೂಲಗಳು ತಿಳಿಸಿವೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *