ದಾವಣಗೆರೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕುಂದವಾಡದ ಜಿನಿಸಿಸ್ ರೆಸಾರ್ಟ್ ಬಳಿ ಶುಕ್ರವಾರ ಮಿನಿ ಬಸ್ ಹಾಗೂ ಲಾರಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಿನಿ ಬಸ್ನಲ್ಲಿದ್ದ ಧಾರವಾಡ ಜಿಲ್ಲೆಯ ನರೇಂದ್ರ ಗ್ರಾಮದ ಆನಂದಗೌಡ ಪಾಟೀಲ (38) ಮೃತಪಟ್ಟವರು. ಬಸ್ನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಹಿಂದಿನಿಂದ ಬಂದ ಲಾರಿ ಮಿನಿ ಬಸ್ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





