ಬೆಂಗಳೂರು: ಬಿಜೆಪಿ ಪಕ್ಷ ಮತ್ತು ನಮ್ಮ ಸರ್ಕಾರ ಜನರ ಪರವಾಗಿರುವ ಸರ್ಕಾರವಾಗಿದೆ ಹೊರತು ಇದು ಯಾವುದೋ ಕಾಂಗ್ರೆಸ್, ಜೆಡಿಎಸ್ ನಂತೆ ಖಾಸಗಿ ಕಂಪನಿಯಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯವರು ನಾಟಕ ಮಾಡ್ತಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಚಿವ ಅಶ್ವಥ್ ನಾರಾಯಣ ತಿರುಗೇಟು ನೀಡಿದ್ದಾರೆ. ಯಾರಿಗಾದರೂ ಚೆನ್ನಾಗಿ ನಾಟಕ ಮಾಡೋಕೆ ಬರುತ್ತೆ ಅಂದರೆ ಅದು ಸಿದ್ದರಾಮಯ್ಯನವರಿಗೆ ಮಾತ್ರ. ನಾಟಕದ ಅನುಭವವನ್ನು ಅವರು ಬೇರೆಯವರಿಗೆ ಹೇಳ್ತಿದ್ದಾರೆ ಎಂದರು.
ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಮಾಡೋದು ಪ್ರತಿಯೊಬ್ಬರ ಕರ್ತವ್ಯ. ಅದರಲ್ಲಿ ತಪ್ಪು, ಕಂಡು ಹಿಡಿಯೋದು, ದೋಷ ಎತ್ತಿ ಹಿಡಿಯೋದು ಸರಿಯಲ್ಲ. ಒಳ್ಳೆಯದು ಮಾಡೋಕೆ ಆಗಿಲ್ಲ ಅಂದರೆ ಸಮಾಜದಲ್ಲಿ ಗೊಂದಲ ಸೃಷ್ಟಿಸಬೇಡಿ. ಒಳ್ಳೆಯದು ಮಾಡೋಕೆ ಯೋಗ್ಯತೆ ಇಲ್ಲ ಅಂದರೆ ಕೆಟ್ಟದ್ದನ್ನು ಹೇಳಬೇಡಿ. ನಿಮ್ಮ ಭಕ್ತಿ ದೇಶದ ಮೇಲೆ ಇದ್ರೆ ತಮ್ಮ ಕರ್ತವ್ಯದ ಮೂಲಕ ಮಾಡಿ. ಅದು ಬಿಟ್ಟು ಇಂತಹ ಡೋಂಘಿ ಹೇಳಿಕೆಗಳನ್ನು ನಿಲ್ಲಿಸಿ ಎಂದು ಅಶ್ವಥ್ ನಾರಾಯಣ್ ಆಕ್ರೋಶ ವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





