Breaking News

ಅ.12 ರಂದು ಶ್ರೀ ನೂಲಿ ಚಂದಯ್ಯನವರ 915 ಜಯಂತ್ಸೋತ್ಸವ

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕು ಆಡಳಿತ, ಹುಬ್ಬಳ್ಳಿ ತಾಲೂಕು ಕೊರಮ ಸಮಾಜ ಹಾಗೂ ಧಾರವಾಡ ಜಿಲ್ಲಾ ಕೊರಮ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಅಗಸ್ಟ್ 12 ರಂದು ಬೆಳಿಗ್ಗೆ 11.30 ಕ್ಕೆ ತಹಶಿಲ್ದಾರರ ಕಚೇರಿಯ ಸಭಾಭವನದಲ್ಲಿ ಆಚರಣೆ ಮಾಡಲಾಗುತ್ತಿದೆ ಎಂದು ಸಮಾಜದ ಮುಖಂಡ ಶಶಿಕಾಂತ ಬಿಜವಾಡ ಹೇಳಿದರು.

12 ನೇ ಶತಮಾನದ ಕಾಯಕಯೋಗಿ ಶಿವಶರಣ‌ ನೂಲಿಯ ಚಂದಯ್ಯನವರ ಜಯಂತ್ಯೋತ್ಸವವನ್ನು ಎಲ್ಲ ಸರ್ಕಾರಿ ಇಲಾಖೆಯಲ್ಲಿ ಆಚರಿಸಲು ಸರ್ಕಾರ ಆದೇಶ ನೀಡಿದೆ ಇದನ್ನು ಅಖಂಡ ಕೊರಮ ಸಮಾಜ ಸ್ವಾಗತಿಸುತ್ತದೆ. ಅಲ್ಲದೇ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಈ ವರ್ಷ ಶ್ರೀ ನೂಲಿ ಚಂದಯ್ಯನವರ 915 ಜಯಂತ್ಸೋತ್ಸವವನ್ನು ರಾಜ್ಯಾದ್ಯಂತ ಆಚರಣೆ ಮಾಡಲಾಗುತ್ತಿದೆ ಎಂದರು.

ಹುಬ್ಬಳ್ಳಿಯಲ್ಲಿ ತಹಶಿಲ್ದಾರರ ಕಚೇರಿ ನಡೆಯಲಿರುವ ಕಾರ್ಯಕ್ರಮದಲ್ಲಿ ರುದ್ರಾಕ್ಷಿಮಠದ ಶ್ರೀ ಬಸವಲಿಂಗ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವನ್ನು ವಹಿಸಲಿದ್ದು, ಅಂದು ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ರಂಗದಲ್ಲಿ ಸಾಧನೆಗೈದ ಸಾಧನಕರಿಗೆ ಸನ್ಮಾನ‌ ಮಾಡಲಾಗುವುದು ಎಂದರು.

ಇದಕ್ಕೂ ಪೂರ್ವದಲ್ಲಿ ಶಿವಶರಣ ನೂಲಿಯ ಚಂದಯ್ಯನವರ ಭಾವಚಿತ್ರದ ಮೆರವಣಿಗೆಯನ್ನು ಗಂಗಾಧರ ನಗರದಿಂದ ಪ್ರಾರಂಭಗೊಂಡು ಕೆಇಬಿ, ರೈಲ್ಚೆ ನಿಲ್ದಾಣ ರಸ್ತೆ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಸಂಗೊಳ್ಳಿ ರಾಯಣ್ಣ ವೃತ್ತ ಮೂಲಕ ತಹಶಿಲ್ದಾರ ಕಚೇರಿ ತಲುಪಿ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು. ಮೆರವಣಿಗೆಯಲ್ಲಿ ಕರಡಿ ಮಜಲು, ಜಗ್ಗ ಹಲಗಿ, ಡೊಳ್ಳು ಸೇರಿದಂತೆ ವಿವಿಧ ವಾದ್ಯ ತಂಡಗಳು ಭಾಗವಹಿಸಲಿವೆ ಎಂದರು.

ಇನ್ನೂ ಸಮಾಜದ ಶಿವಶರಣ ಶ್ರೀ ನೂಲಿ ಚಂದಯ್ಯನವರ ಜಯಂತಿಗೆ ಸರ್ಕಾರ ಯಾವ ರೀತಿಯಾಗಿ ಅನುಮತಿ ನೀಡಿದೆ ಅದರಂತೆ ಸಮಾಜಕ್ಕೆ ಪ್ರತ್ಯೇಕ ನಿಗಮ‌ಮಂಡಳಿ ರಚನೆ ಮಾಡಬೇಕು. ಅದಕ್ಕೆ ಕನಿಷ್ಠ 50 ಲಕ್ಷ ಹಣವನ್ನು ಬಿಡುಗಡೆ ಮಾಡಿ ಸಮಾಜದ ಅಭಿವೃದ್ಧಿಗೆ ಸರ್ಕಾರ ಶ್ರಮಿಸಬೇಕೆಂದು ತಿಳಿಸಿದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *