ಬೆಂಗಳೂರು: ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ರದ್ದುಪಡಿಸಿದ್ದ ‘ಜನೋತ್ಸವ’ ಕಾರ್ಯಕ್ರಮಕ್ಕೆ ಸರ್ಕಾರ ಮತ್ತೆ ಸಜ್ಜಾಗಿದ್ದು, ರಾಜ್ಯದ ಐದಾರು ಕಡೆ ಜನೋತ್ಸವ ನಡೆಸಿ ನಂತರ ದೊಡ್ಡ ಮಟ್ಟದಲ್ಲಿ ಸಮಾರೋಪ ಸಮಾರಂಭ ಆಯೋಜಿಸಲು ತೀರ್ಮಾನಿಸಿದೆ.
ಈ ನಿಟ್ಟಿನಲ್ಲಿ ಆಗಸ್ಟ್ 28ರಂದು ದೊಡ್ಡಬಳ್ಳಾಪುರದಲ್ಲಿ ಮೊದಲ ಹಂತದ ಕಾರ್ಯಕ್ರಮ ನಡೆಸಲು ನಿರ್ಧಾರ ಕೈಗೊಂಡಿದೆ. ಈ ಮಧ್ಯೆ, ಸಮಾರೋಪ ಸಮಾರಂಭವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಅಮೃತಮಹೋತ್ಸವ ನಡೆದ ದಾವಣಗೆರೆಯಲ್ಲೇ ನಡೆಸಲು ಚರ್ಚೆ ನಡೆದಿದೆ ಎನ್ನಲಾಗುತ್ತಿದೆ. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಅವರು ‘ಜನೋತ್ಸವ’ ಕಾರ್ಯಕ್ರಮ ಆಯೋಜನೆ ಬಗ್ಗೆ ಖಚಿತ ಮಾಹಿತಿ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





