Breaking News

ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಕೆಂಪು ಕೋಟೆ ಪೊಲೀಸರ ಭದ್ರಕೋಟೆ


ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಈಗ ಪೊಲೀಸರ ಭದ್ರಕೋಟೆಯಾಗಿ ಮಾರ್ಪಾಡಾಗಿದೆ.

ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿಯೇ ರಾಷ್ಟ್ರ ಧ್ವಜಾರೋಹಣ ಮಾಡಿ, ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಂಪುಕೋಟೆಯ ಸುತ್ತಲೂ 10 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸುಮಾರು 7 ಸಾವಿರ ಆಹ್ವಾನಿತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಬಹು ಹಂತದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ.

ಕೋಟೆಯ ಪ್ರವೇಶ ದ್ವಾರದಲ್ಲೇ ಮುಖ ಗುರುತಿಸುವ ವ್ಯವಸ್ಥೆ (ಫೇಷಿಯಲ್‌ ರೆಕಗ್ನಿಷನ್‌ ಸಿಸ್ಟಂ) ಕ್ಯಾಮೆರಾಗಳನ್ನು ಅಳ ವಡಿಸಲಾಗಿದೆ. ಕೆಂಪುಕೋಟೆಯ ಸುತ್ತಲೂ 5 ಕಿ.ಮೀ. ವ್ಯಾಪ್ತಿಯನ್ನು “ಗಾಳಿಪಟ ನಿಷೇಧ ವಲಯ’ ಎಂದು ಘೋಷಿಸಲಾಗಿದೆ. ಜತೆಗೆ, ಗಾಳಿಪಟ ಹಿಡಿಯುವ 400 ಮಂದಿಯನ್ನು ನಿಯೋಜಿಸಲಾಗಿದೆ. ಡಿಆರ್‌ಡಿಒ ಅಭಿವೃದ್ಧಿಪಡಿಸಿದ ಡ್ರೋನ್‌ ನಿಗ್ರಹ ವ್ಯವಸ್ಥೆಯೂ ಕಾರ್ಯಕ್ರಮದ ಸ್ಥಳದಲ್ಲಿ ಕಣ್ಣಿಟ್ಟಿರಲಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *