ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಈಗ ಪೊಲೀಸರ ಭದ್ರಕೋಟೆಯಾಗಿ ಮಾರ್ಪಾಡಾಗಿದೆ.
ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿಯೇ ರಾಷ್ಟ್ರ ಧ್ವಜಾರೋಹಣ ಮಾಡಿ, ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಂಪುಕೋಟೆಯ ಸುತ್ತಲೂ 10 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸುಮಾರು 7 ಸಾವಿರ ಆಹ್ವಾನಿತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಬಹು ಹಂತದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ.
ಕೋಟೆಯ ಪ್ರವೇಶ ದ್ವಾರದಲ್ಲೇ ಮುಖ ಗುರುತಿಸುವ ವ್ಯವಸ್ಥೆ (ಫೇಷಿಯಲ್ ರೆಕಗ್ನಿಷನ್ ಸಿಸ್ಟಂ) ಕ್ಯಾಮೆರಾಗಳನ್ನು ಅಳ ವಡಿಸಲಾಗಿದೆ. ಕೆಂಪುಕೋಟೆಯ ಸುತ್ತಲೂ 5 ಕಿ.ಮೀ. ವ್ಯಾಪ್ತಿಯನ್ನು “ಗಾಳಿಪಟ ನಿಷೇಧ ವಲಯ’ ಎಂದು ಘೋಷಿಸಲಾಗಿದೆ. ಜತೆಗೆ, ಗಾಳಿಪಟ ಹಿಡಿಯುವ 400 ಮಂದಿಯನ್ನು ನಿಯೋಜಿಸಲಾಗಿದೆ. ಡಿಆರ್ಡಿಒ ಅಭಿವೃದ್ಧಿಪಡಿಸಿದ ಡ್ರೋನ್ ನಿಗ್ರಹ ವ್ಯವಸ್ಥೆಯೂ ಕಾರ್ಯಕ್ರಮದ ಸ್ಥಳದಲ್ಲಿ ಕಣ್ಣಿಟ್ಟಿರಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

