Breaking News

ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಕೆಂಪು ಕೋಟೆ ಪೊಲೀಸರ ಭದ್ರಕೋಟೆ


ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಈಗ ಪೊಲೀಸರ ಭದ್ರಕೋಟೆಯಾಗಿ ಮಾರ್ಪಾಡಾಗಿದೆ.

ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿಯೇ ರಾಷ್ಟ್ರ ಧ್ವಜಾರೋಹಣ ಮಾಡಿ, ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಂಪುಕೋಟೆಯ ಸುತ್ತಲೂ 10 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸುಮಾರು 7 ಸಾವಿರ ಆಹ್ವಾನಿತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಬಹು ಹಂತದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ.

ಕೋಟೆಯ ಪ್ರವೇಶ ದ್ವಾರದಲ್ಲೇ ಮುಖ ಗುರುತಿಸುವ ವ್ಯವಸ್ಥೆ (ಫೇಷಿಯಲ್‌ ರೆಕಗ್ನಿಷನ್‌ ಸಿಸ್ಟಂ) ಕ್ಯಾಮೆರಾಗಳನ್ನು ಅಳ ವಡಿಸಲಾಗಿದೆ. ಕೆಂಪುಕೋಟೆಯ ಸುತ್ತಲೂ 5 ಕಿ.ಮೀ. ವ್ಯಾಪ್ತಿಯನ್ನು “ಗಾಳಿಪಟ ನಿಷೇಧ ವಲಯ’ ಎಂದು ಘೋಷಿಸಲಾಗಿದೆ. ಜತೆಗೆ, ಗಾಳಿಪಟ ಹಿಡಿಯುವ 400 ಮಂದಿಯನ್ನು ನಿಯೋಜಿಸಲಾಗಿದೆ. ಡಿಆರ್‌ಡಿಒ ಅಭಿವೃದ್ಧಿಪಡಿಸಿದ ಡ್ರೋನ್‌ ನಿಗ್ರಹ ವ್ಯವಸ್ಥೆಯೂ ಕಾರ್ಯಕ್ರಮದ ಸ್ಥಳದಲ್ಲಿ ಕಣ್ಣಿಟ್ಟಿರಲಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *