Breaking News

ಕಲಘಟಗಿಯಲ್ಲಿ ಇತಿಹಾಸ ಸೃಷ್ಟಿಸಿದ “ಧ್ವಜ ಜಾಥಾ” ಹೊಸ ಕ್ರಾಂತಿಗೆ ಮುನ್ನುಡಿ ಬರೆದ ಲಾಡ್!

ಕಲಘಟಗಿ: ಭಾರತದಲ್ಲಿ 76 ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ಅದರಂತೆ ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ 9 ಕಿ.ಮೀ ಉದ್ದದ ತ್ರಿವರ್ಣ ಧ್ವಜ ರ್ಯಾಲಿ ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ.

ಹೌದು, ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ಸ್ವಾತಂತ್ರ್ಯ ಭಾರತದ 75 ನೇ ವರ್ಷದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕಲಘಟಗಿ ಹೊರವಲಯದ ದಾಸ್ತಿಕೊಪ್ಪ‌ ಬ್ರಿಡ್ಜ್ ನಿಂದ ಬೆಳಿಗ್ಗೆ 9 ಗಂಟೆಯಿಂದ ಆರಂಭಗೊಂಡ ಈ ಗಿನ್ನಿಸ್ ದಾಖಲೆಯ ಧ್ವಜ ಜಾಥಾ, ಕಲಘಟಗಿ ಪಟ್ಟಣದ ಮೂಲಕ ಗಳಗಿನಗಟ್ಟಿ ಕ್ರಾಸ್ ವರೆಗೆ ನಡೆಯಿತು. ಈ ಧ್ವಜ ಯಾತ್ರೆದಲ್ಲಿ ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದ ಇನ್ನಿತರ ಕಡೆಗಳಿಂದಲೂ ಸಾವಿರಾರು ಜನರು ಭಾಗಿಯಾಗಿದ್ದರು.

ಇನ್ನು ತ್ರಿವರ್ಣ ಯಾತ್ರೆಗೆ ಬಳಸಿದ ರಾಷ್ಟ್ರಧ್ವಜ 8.5 ಕಿ.ಮೀ ಉದ್ದ ಹಾಗೂ 9 ಅಡಿ ಅಗಲವಿದ್ದು, ಬೆಂಗಳೂರಿನಲ್ಲಿ 200 ಕಾರ್ಮಿಕರು ನಿರಂತರವಾಗಿ ಒಂದು ತಿಂಗಳಿಂದ ತಯಾರಿಸಿದ್ದಾರೆ. ಇಂತಹ ಐತಿಹಾಸಿಕ ತ್ರಿವರ್ಣ ಧ್ವಜಯಾತ್ರೆ ಉದ್ದಕ್ಕೂ ಭಾರತ ಮಾತಾ ಕೀ ಜೈ ಎಂಬ ಘೋಷಣೆಗಳು ಮೊಳಗಿದವು. ಅಲ್ಲದೇ ರಾಷ್ಟ್ರಭಕ್ತಿ ಗೀತೆಗಳು ಮೈಮೇಲಿನ ಕೂದಲನ್ನು ನಿಮಿರುವಂತೆ ಮಾಡಿದವು.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *