ಮೈಸೂರು: ಅಂದುಕೊಂಡಂತೆ ಕಾಮಗಾರಿ ಸಾಗಿದ್ದರೇ ಆಗಸ್ಟ್ 15ರಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಒನ್ ವೇ ಸಂಚಾರಕ್ಕೆ ಚಾಲನೆ ನೀಡಬೇಕಿತ್ತು. ಆದ್ರೇ ದಶಪಥ ಕಾಮಗಾರಿಯಿಂದಾಗಿ ಬೆಂಗಳೂರು – ಮೈಸೂರು ಹೆದ್ದಾರಿ ಮೊದಲ ಹಂತದ ಕಾಮಗಾರಿ ವಿಳಂಬವಾಗಿದೆ.
ಹೀಗಾಗಿ ಕೊಟ್ಟ ಮಾತಿಗೆ ತಪ್ಪಿದ್ದೇನೆ. ದಯವಿಟ್ಟು ಕ್ಷಮಿಸಿ ಎಂಬುದಾಗಿ ಸಂಸದ ಪ್ರತಾಪ್ ಸಿಂಹ ಜನತೆಯ ಕ್ಷಮೆಯಾಚಿಸಿದ್ದಾರೆ. ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡಿದ್ದು, ಜುಲೈನಲ್ಲಿ ಬೆಂಗಳೂರು-ನಿಡಘಟ್ಟ ರಸ್ತೆಯನ್ನು ಸಂಚಾರಕ್ಕೆ ತೆರವು ಮಾಡಿಸುತ್ತೇನೆ ಎಂದಿದ್ದೆ, ನಂತರ ಆಗಸ್ಟ್ 15 ರಂದು ಬಿಡದಿ, ರಾಮನಗರ ಚನ್ನಪಟ್ಟಣ ಬೈಪಾಸ್ ಓಪನ್ ಮಾಡುತ್ತೇವೆ ಎಂದೆ. ಮಾತಿಗೆ ತಪ್ಪಿದ್ದೇನೆ, ದಯವಿಟ್ಟು ಕ್ಷಮಿಸಿ. ಎಲ್ಲ ಪ್ರಯತ್ನಗಳ ನಡುವೆಯೂ ಇನ್ನೂ ವಾರ, ಹತ್ತು ದಿನಗಳ ಕೆಲಸ ಬಾಕಿಯಿದೆ. ಗುಡ್ಡ ಕಡಿದು ರಸ್ತೆ ನಿರ್ಮಾಣ ನಡೆಯುತ್ತಿದೆ, ಸ್ವಲ್ಪ ಕಾಲಾವಕಾಶ ನೀಡಿ, ಪ್ಲೀಸ್ ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

