ಬೆಂಗಳೂರು: ಇನ್ನೊಂದು ತಿಂಗಳೊಳಗೆ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವಾಗಿ ಮಾಡಿ ಆದೇಶ ಹೊರಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದರು.
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆಯ ದೇವನಹಳ್ಳಿಯು ನಾಡಪ್ರಭು ಕೆಂಪೇಗೌಡರು ಆಡಳಿತ ನಡೆಸಿದ ಪ್ರದೇಶವಾಗಿದೆ. 54 ಪೇಟೆಗಳು, 340 ಕ್ಕೂ ಅಧಿಕ ಕೆರೆಗಳ ನಿರ್ಮಾಣಗೊಂಡಿವೆ. ಪರಿಸರ ಸಂರಕ್ಷಣೆ ಮೊದಲಾದ ಮಹತ್ವದ ಕ್ರಮಗಳನ್ನು ಅವರು ಜಾರಿ ಮಾಡಿದ್ದರು.
ಕೆಂಪೇಗೌಡರ ಆಡಳಿತದ ನಾಡಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿರುವುದು ಹೆಮ್ಮೆ ತಂದಿದ್ದು, ಇಂತಹ ದೇವನಹಳ್ಳಿ ಪ್ರದೇಶವನ್ನು ಜಿಲ್ಲಾ ಕೇಂದ್ರವಾಗಿಸಲು ಒಂದು ತಿಂಗಳೊಳಗೆ ಆದೇಶ ಹೊರಡಿಸಲಾಗುವುದು ಎಂದು ಅವರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

